ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
Cross references
ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.