ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
Cross references
ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ