ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
Cross references
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.