ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
Cross references
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;