Home Bibles ಅಪೋಸ್ತಲರ ಕೃತ್ಯಗಳು 14:22 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 14:22 · ಕನ್ನಡ ಬೈಬಲ್

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

Cross references

ಯೆಶಾಯ 35:3

ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.

ಮತ್ತಾಯ 10:21

ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

ಮತ್ತಾಯ 10:38

ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.

ಮತ್ತಾಯ 16:24

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಮತ್ತಾಯ 19:24

ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.

ಮಾರ್ಕ 9:47

ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.

ಮಾರ್ಕ 10:24

ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.

ಮಾರ್ಕ 10:30

ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.

ಲೂಕ 22:28

ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.

ಲೂಕ 24:26

ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಯೋಹಾನ 3:5

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

ಯೋಹಾನ 8:31

ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.

ಯೋಹಾನ 12:25

ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ಯೋಹಾನ 15:4

ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಯೋಹಾನ 15:9

ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.

ಯೋಹಾನ 15:20

ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.

ಯೋಹಾನ 16:1

ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.

ಯೋಹಾನ 16:33

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ಅಪೋಸ್ತಲರ ಕೃತ್ಯಗಳು 6:7

ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.

ಅಪೋಸ್ತಲರ ಕೃತ್ಯಗಳು 9:16

ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 11:23

ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.

ಅಪೋಸ್ತಲರ ಕೃತ್ಯಗಳು 13:43

ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಪೋಸ್ತಲರ ಕೃತ್ಯಗಳು 15:32

ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.

ಅಪೋಸ್ತಲರ ಕೃತ್ಯಗಳು 15:41

ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.

ಅಪೋಸ್ತಲರ ಕೃತ್ಯಗಳು 18:23

ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.

ರೋಮಾಪುರದವರಿಗೆ 8:17

ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.

1 ಕೊರಿಂಥದವರಿಗೆ 1:8

ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.

ಕೊಲೊಸ್ಸೆಯವರಿಗೆ 1:23

ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ

1 ತೆಸಲೋನಿಕದವರಿಗೆ 3:2

ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

1 ತೆಸಲೋನಿಕದವರಿಗೆ 3:13

ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

2 ತಿಮೋಥೆಯ 1:8

ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.

2 ತಿಮೋಥೆಯ 2:11

ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.

2 ತಿಮೋಥೆಯ 3:12

ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.

1 ಪೇತ್ರ 4:12

ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.

1 ಪೇತ್ರ 5:10

ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.

2 ಪೇತ್ರ 1:11

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.

ಯೂದ 1:3

ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.

ಯೂದ 1:20

ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.

ಪ್ರಕಟನೆ 1:9

ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.

ಪ್ರಕಟನೆ 2:10

ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

Interlinear

Choose Theme