ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
Cross references
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ