ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
Cross references
ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,