ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
Cross references
ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.
ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು