ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
Cross references
ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.