ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
Cross references
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.