ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
Cross references
ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.