Home Bibles ಅಪೋಸ್ತಲರ ಕೃತ್ಯಗಳು 16:17 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 16:17 · ಕನ್ನಡ ಬೈಬಲ್

ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.

Cross references

ಆದಿಕಾಂಡ 14:18

ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.

ಕೀರ್ತನೆಗಳು 57:2

ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.

ಕೀರ್ತನೆಗಳು 78:35

ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.

ದಾನಿಯೇಲ 3:26

ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

ದಾನಿಯೇಲ 3:28

ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.

ದಾನಿಯೇಲ 4:2

ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.

ದಾನಿಯೇಲ 5:18

ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.

ದಾನಿಯೇಲ 5:21

ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.

ದಾನಿಯೇಲ 6:16

ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.

ದಾನಿಯೇಲ 6:20

ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.

ಯೋನ 1:9

ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.

ಮೀಕ 6:6

ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?

ಮತ್ತಾಯ 7:13

ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.

ಮತ್ತಾಯ 8:29

ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.

ಮತ್ತಾಯ 22:16

ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು

ಮಾರ್ಕ 1:24

ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.

ಮಾರ್ಕ 5:7

ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

ಮಾರ್ಕ 12:14

ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?

ಲೂಕ 1:77

ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

ಲೂಕ 1:79

ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

ಲೂಕ 4:34

ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.

ಲೂಕ 4:41

ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.

ಲೂಕ 8:28

ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

ಲೂಕ 20:21

ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಅಪೋಸ್ತಲರ ಕೃತ್ಯಗಳು 16:30

ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು

ಅಪೋಸ್ತಲರ ಕೃತ್ಯಗಳು 18:26

ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.

ಅಪೋಸ್ತಲರ ಕೃತ್ಯಗಳು 19:13

ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.

ಹೆಬ್ರಿಯರಿಗೆ 10:19

ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

1 ಪೇತ್ರ 2:16

ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.

Interlinear

Choose Theme