ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
Cross references
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?