ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
Cross references
ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.