ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
Cross references
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.