ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Cross references
ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.