ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
Cross references
ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.