ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
Cross references
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.