ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
Cross references
ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.