ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
Cross references
ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.