Home Bibles ಅಪೋಸ್ತಲರ ಕೃತ್ಯಗಳು 17:30 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 17:30 · ಕನ್ನಡ ಬೈಬಲ್

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

Cross references

ಕೀರ್ತನೆಗಳು 50:21

ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.

ಯೆಶಾಯ 21:12

ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.

ಮತ್ತಾಯ 3:2

ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಮತ್ತಾಯ 4:17

ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

ಮತ್ತಾಯ 20:7

ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.

ಮಾರ್ಕ 1:15

ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.

ಮಾರ್ಕ 6:12

ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.

ಲೂಕ 13:5

ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.

ಲೂಕ 15:10

ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೋಸ್ತಲರ ಕೃತ್ಯಗಳು 3:19

ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೋಸ್ತಲರ ಕೃತ್ಯಗಳು 11:18

ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 14:16

ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;

ಅಪೋಸ್ತಲರ ಕೃತ್ಯಗಳು 17:23

ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಅಪೋಸ್ತಲರ ಕೃತ್ಯಗಳು 26:17

ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ರೋಮಾಪುರದವರಿಗೆ 1:28

ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.

ರೋಮಾಪುರದವರಿಗೆ 2:4

ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ರೋಮಾಪುರದವರಿಗೆ 3:23

ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

ರೋಮಾಪುರದವರಿಗೆ 3:25

ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

2 ಕೊರಿಂಥದವರಿಗೆ 7:10

ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

ಎಫೆಸದವರಿಗೆ 4:17

ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;

ಎಫೆಸದವರಿಗೆ 5:6

ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

1 ಪೇತ್ರ 1:14

ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ

1 ಪೇತ್ರ 4:3

ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

Interlinear

Choose Theme