Home Bibles ಅಪೋಸ್ತಲರ ಕೃತ್ಯಗಳು 17:32 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 17:32 · ಕನ್ನಡ ಬೈಬಲ್

ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.

Cross references

ಆದಿಕಾಂಡ 19:14

ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

2 ದಿನವೃತ್ತಾಂತ 30:9

ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.

2 ದಿನವೃತ್ತಾಂತ 36:16

ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ಲೂಕ 14:18

ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಲೂಕ 22:63

ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.

ಲೂಕ 23:11

ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.

ಲೂಕ 23:36

ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು

ಅಪೋಸ್ತಲರ ಕೃತ್ಯಗಳು 2:13

ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.

ಅಪೋಸ್ತಲರ ಕೃತ್ಯಗಳು 13:41

ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

ಅಪೋಸ್ತಲರ ಕೃತ್ಯಗಳು 17:18

ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ಅಪೋಸ್ತಲರ ಕೃತ್ಯಗಳು 17:31

ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ಅಪೋಸ್ತಲರ ಕೃತ್ಯಗಳು 24:25

ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ಅಪೋಸ್ತಲರ ಕೃತ್ಯಗಳು 25:19

ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.

ಅಪೋಸ್ತಲರ ಕೃತ್ಯಗಳು 26:8

ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

ಅಪೋಸ್ತಲರ ಕೃತ್ಯಗಳು 26:24

ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.

1 ಕೊರಿಂಥದವರಿಗೆ 1:23

ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.

1 ಕೊರಿಂಥದವರಿಗೆ 4:10

ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.

2 ಕೊರಿಂಥದವರಿಗೆ 6:2

(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).

ಹೆಬ್ರಿಯರಿಗೆ 3:7

ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

ಹೆಬ್ರಿಯರಿಗೆ 11:36

ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

ಹೆಬ್ರಿಯರಿಗೆ 13:13

ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.

Interlinear

Choose Theme