ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
Cross references
ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.