ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
Cross references
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.