ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
Cross references
ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.