ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
Cross references
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;