ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
Cross references
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?
ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.