ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
Cross references
ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.