ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
Cross references
ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?