ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
Cross references
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ