ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
Cross references
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.