Home Bibles ಅಪೋಸ್ತಲರ ಕೃತ್ಯಗಳು 2:38 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 2:38 · ಕನ್ನಡ ಬೈಬಲ್

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

Cross references

ಯೆಶಾಯ 32:15

ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.

ಯೆಶಾಯ 44:3

ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.

ಯೆಶಾಯ 59:21

ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಯೆಹೆಜ್ಕೇಲ 39:29

ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೋವೇಲ 2:28

ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.

ಜೆಕರ್ಯ 12:10

ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಮತ್ತಾಯ 3:2

ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಮತ್ತಾಯ 3:8

ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

ಮತ್ತಾಯ 4:17

ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

ಮತ್ತಾಯ 21:28

ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

ಮತ್ತಾಯ 28:19

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಮಾರ್ಕ 1:15

ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.

ಮಾರ್ಕ 16:16

ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಲೂಕ 15:1

ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೋಸ್ತಲರ ಕೃತ್ಯಗಳು 2:16

ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--

ಅಪೋಸ್ತಲರ ಕೃತ್ಯಗಳು 3:19

ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೋಸ್ತಲರ ಕೃತ್ಯಗಳು 5:31

ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 8:12

ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.

ಅಪೋಸ್ತಲರ ಕೃತ್ಯಗಳು 8:15

ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.

ಅಪೋಸ್ತಲರ ಕೃತ್ಯಗಳು 8:20

ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.

ಅಪೋಸ್ತಲರ ಕೃತ್ಯಗಳು 8:36

ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.

ಅಪೋಸ್ತಲರ ಕೃತ್ಯಗಳು 8:37

ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ

ಅಪೋಸ್ತಲರ ಕೃತ್ಯಗಳು 10:44

ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.

ಅಪೋಸ್ತಲರ ಕೃತ್ಯಗಳು 10:48

ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.

ಅಪೋಸ್ತಲರ ಕೃತ್ಯಗಳು 16:15

ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

ಅಪೋಸ್ತಲರ ಕೃತ್ಯಗಳು 16:31

ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 17:30

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ಅಪೋಸ್ತಲರ ಕೃತ್ಯಗಳು 19:4

ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಅಪೋಸ್ತಲರ ಕೃತ್ಯಗಳು 22:16

ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 26:18

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ಅಪೋಸ್ತಲರ ಕೃತ್ಯಗಳು 26:20

ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ರೋಮಾಪುರದವರಿಗೆ 6:3

ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

1 ಕೊರಿಂಥದವರಿಗೆ 1:13

ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?

ತೀತ 3:5

ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

1 ಪೇತ್ರ 3:21

ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

Interlinear

Choose Theme