ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
Cross references
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.