ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
Cross references
ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.