ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Cross references
ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ