ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
Cross references
ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.
ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.