ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
Cross references
ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.