ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
Cross references
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.