ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
Cross references
ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.