Home Acts 21 · ಕನ್ನಡ ಬೈಬಲ್

Acts

Chapter 21

ಕನ್ನಡ ಬೈಬಲ್
1ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್‌ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು.
2ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು.
3ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್‌ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
6ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
7ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
10ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
12ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
15ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
22ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
23ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
28ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
29(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
31ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
32ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
35ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?
38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme