ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
Cross references
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.