Home Bibles ಅಪೋಸ್ತಲರ ಕೃತ್ಯಗಳು 21:3 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 21:3 · ಕನ್ನಡ ಬೈಬಲ್

ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್‌ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.

Cross references

ನ್ಯಾಯಾಧಿಪತಿಗಳು 10:6

ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.

2 ಸಮುವೇಲ 8:6

ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.

ಕೀರ್ತನೆಗಳು 45:12

ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.

ಕೀರ್ತನೆಗಳು 87:4

ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.

ಯೆಶಾಯ 7:2

ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.

ಯೆಶಾಯ 23:17

ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.

ಮತ್ತಾಯ 4:24

ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

ಮತ್ತಾಯ 11:21

ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ಲೂಕ 2:2

ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.

ಲೂಕ 10:13

ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

ಅಪೋಸ್ತಲರ ಕೃತ್ಯಗಳು 4:36

ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಪೋಸ್ತಲರ ಕೃತ್ಯಗಳು 11:19

ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

ಅಪೋಸ್ತಲರ ಕೃತ್ಯಗಳು 12:20

ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ

ಅಪೋಸ್ತಲರ ಕೃತ್ಯಗಳು 13:4

ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.

ಅಪೋಸ್ತಲರ ಕೃತ್ಯಗಳು 15:23

ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

ಅಪೋಸ್ತಲರ ಕೃತ್ಯಗಳು 15:39

ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.

ಅಪೋಸ್ತಲರ ಕೃತ್ಯಗಳು 15:41

ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.

ಅಪೋಸ್ತಲರ ಕೃತ್ಯಗಳು 18:18

ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ

ಅಪೋಸ್ತಲರ ಕೃತ್ಯಗಳು 21:16

ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.

ಅಪೋಸ್ತಲರ ಕೃತ್ಯಗಳು 27:4

ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.

Interlinear

Choose Theme