ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
Cross references
ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ
ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.