ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Cross references
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.