ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
Cross references
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;