ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
Cross references
ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.