ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
Cross references
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.