ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
Cross references
ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.