ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
Cross references
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.