ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
Cross references
ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.